Friday 5 April 2013

'ಸಕಾಲ'ಕ್ಕೆ ಸಖತ್ ತಯಾರಿ!

ಕರ್ನಾಟಕ ಸರ್ಕಾರ ಏಪ್ರಿಲ್ ಮೊದಲನೇ ತಾರೀಖಿನಿಂದ 'ಸಕಾಲ' ವನ್ನು ಜಾರಿಗೆ ತಂದಿದೆ. ಅಂದ್ರೆ ಎಲ್ಲರೂ ಎಲ್ಲಾ ಕೆಲಸವನ್ನು ಸಕಾಲಕ್ಕೆ ಮಾಡಬೇಕು ಎಂದು ಇದರ ಉದ್ದೇಶ. ಇದು ಎಲ್ಲಾ ಸರ್ಕಾರಿ ಆಫೀಸುಗಳು, ಶಾಲಾ ಕಾಲೇಜುಗಳು, ಆಸ್ಪತ್ರೆಯಲ್ಲಿ ಕೆಲಸ ಮಾಡುವ ಸರ್ಕಾರಿ ನೌಕರರಿಗೆ ಅನ್ವಯಿಸುತ್ತೆ. ಇದು ಮುಖ್ಯಮಂತ್ರಿ ಸದಾನಂದರ ಇನಿಷಿಯೇಟಿವ್. ಇದನ್ನು ಆಚರಿಸಿಕೊಂಡು ಬಂದರೆ ಜೀವನ ಖುಷಿಯಾಗಿ ಮತ್ತು ಸದಾ ಆನಂದಾಯಕವಾಗಿ ಇರುತ್ತೆ ಅನ್ನುವ ದೃಢ ನಂಬಿಕೆ ಅವರದು.
 ನಮ್ಮ ಅಜ್ಜಿಯ ಗ್ರೂಪಿನವರ ಎಕ್ಸ್ ಪಿರಿಯನ್ಸ್ ಏನು? ನೋಡೋಣ... ಬನ್ನಿ......
 
ನಮ್ಮ ಅಜ್ಜಿ ಅವರ 'ಪಟಾಲಮ್ ಎಕ್ಸ್ ಪ್ರೆಸ್' ಮಾಮೂಲಿನಂತೆ ಹರಿಕಥೆ ಕೇಳೋದಕ್ಕೆ ಹೊರಟ್ರು. ಆ ದಿನ ಅಚ್ಯುತದಾಸರು ಕರ್ಣನ ಅಪಾರವಾದ ದಾನ ಮಾಡುವ ವ್ಯಕ್ತಿತ್ವವನ್ನು ವಿವರಿಸುತ್ತಿದ್ದರು. ಅಜ್ಜಿ ಗ್ರೂಪ್ ಕೊನೆಯಲ್ಲಿ ಕೂತಿತ್ತು. 'ಬ್ರಾಹ್ಮಣನ ವೇಷದಲ್ಲಿ ಬಂದ ಇಂದ್ರನಿಗೆ ಕವಚ ಮತ್ತು ಕರ್ಣಕುಂಡಲವನ್ನೇ ಕಿತ್ತು ಕೊಟ್ಟ ಕರ್ಣ, ನಿಜವಾಗಿಯೂ ದಾನ ಶೂರ ಕರ್ಣ.. ದೇಹದ ಒಂದು ಭಾಗವನ್ನೇ ದಾನ ಮಾಡಿದ'.
  Read more April 05,  2013...